This is the title of the web page
This is the title of the web page

Please assign a menu to the primary menu location under menu

State

ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿ

ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿ

ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿ
ಬಳ್ಳಾರಿ: ಮಾಜಿ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪ್ರತಿಭಟನೆ ತೀವ್ರಗೊಂಡಿರುವ ನಡುವೆಯೇ ರಾಜ್ಯ ಸರ್ಕಾರ ಅವರಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಿದೆ. ಈಗಾಗಲೇ ಯೋಜನೆ ಮತ್ತು ಸಾಂಖ್ಯಿಕ ಖಾತೆ ನಿರ್ವಹಿಸುತ್ತಿರುವ ನಾಗೇಂದ್ರ ಅವರಿಗೆ ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯ’ದ ಹೊಣೆ ವಹಿಸಲಾಗಿದೆ.
ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಸಮನ್ವಯಕ್ಕೆ ಈ ಸಚಿವಾಲಯ ಪ್ರಮುಖ ಪಾತ್ರ ವಹಿಸಲಿದೆ. 2025ರಲ್ಲಿ ರಚನೆಯಾದ ಈ ಸಚಿವಾಲಯದ ಅಧೀನದಲ್ಲಿಯೇ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಕಾರ್ಯನಿರ್ವಹಿಸಲಿದೆ.
ಸಚಿವಾಲಯದ ಕಾರ್ಯನಿರ್ವಹಣೆಗೆ ಸರ್ಕಾರ ಒಟ್ಟು 16 ಹುದ್ದೆಗಳನ್ನು ಮೀಸಲಿಟ್ಟಿದೆ. ಈ ಹಿನ್ನೆಲೆಯಲ್ಲಿ ನಾಗೇಂದ್ರ ಅವರಿಗೆ ನೀಡಲಾಗಿರುವ ಹೆಚ್ಚುವರಿ ಜವಾಬ್ದಾರಿ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಒಂದೆಡೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಒತ್ತಾಯಿಸಿ ಹೋರಾಟ ನಡೆಸುತ್ತಿವೆ. ಮತ್ತೊಂದೆಡೆ ರಾಜ್ಯ ಸರ್ಕಾರ ಅವರಿಗೆ ಕಲ್ಯಾಣ ಕರ್ನಾಟಕದಂತಹ ಪ್ರಮುಖ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದ ಸಚಿವಾಲಯದ ಜವಾಬ್ದಾರಿ ನೀಡಿರುವುದು ಗಮನ ಸೆಳೆದಿದೆ.
ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ಹಿಂದುಳಿದ ಪ್ರದೇಶಗಳಿಗೆ ಮೂಲಸೌಕರ್ಯ, ಶಿಕ್ಷಣ, ಉದ್ಯೋಗ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ಈ ಸಚಿವಾಲಯದ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ನಾಗೇಂದ್ರ ಅವರ ಮುಂದಿನ ಕಾರ್ಯವೈಖರಿ ಹಾಗೂ ಸಚಿವಾಲಯದ ಮೂಲಕ ಕೈಗೊಳ್ಳಲಿರುವ ಕ್ರಮಗಳತ್ತ ಇದೀಗ ಕಲ್ಯಾಣ ಕರ್ನಾಟಕದ ಜನರ ಗಮನ ನೆಟ್ಟಿದೆ.


News 9 Today

Leave a Reply