Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಕರ್ಲತೋಟದ ಕ್ಯಾದಿಗೆ ಹಳ್ಳದ ಸೇತುವೆ ಕಾಮಗಾರಿಗೆ ಚಾಲನೆ.

*ಕಾಕರ್ಲತೋಟದ ಕ್ಯಾದಿಗೆ ಹಳ್ಳದ ಸೇತುವೆ ಕಾಮಗಾರಿಗೆ ಚಾಲನೆ.*

ಬಳ್ಳಾರಿ, ಸೆ.12: ನಗರದ 5ನೇ ವಾರ್ಡಿನ ಕಾಕರ್ಲತೋಟ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿ ಮಾಡಲಾಗುವುದು ಎಂದು ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ವಿಶೇಷ ಅನುದಾನದ ಅಡಿ ಅಂದಾಜು 8 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಆಗಲಿರುವ ಸೇತುವೆ ಹಾಗೂ ರಸ್ತೆ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಗುಗ್ಗರ ಹಟ್ಟಿಯ ಬಳಿ ಮುಖ್ಯ ರಸ್ತೆ (ಬಳ್ಳಾರಿ-ಬೆಂಗಳೂರು)ಯಲ್ಲಿ ವಾಹನ ದಟ್ಟಣೆಯಿಂದ ಸಂಚಾರ ಅಸ್ತವ್ಯಸ್ತ ಆಗುತ್ತಿರುವುದರಿಂದ ಸದರಿ ನೂತನ ಸೇತುವೆಯ ನಿರ್ಮಾಣದಿಂದ ಟ್ರಾಫಿಕ್ ಜಾಮ್ ತಗ್ಗಲಿದೆ, ಅಲ್ಲದೇ ಬಳ್ಳಾರಿ ನಗರ ಕೇಂದ್ರದಿಂದ ಕಾಕರ್ಲತೋಟದ ಭಾಗಕ್ಕೆ ಸಂಚರಿಸುವ ಜನರಿಗೂ ಅನುಕೂಲ ಆಗಲಿದೆ ಎಂದರು.

ಸೇತುವೆ ಕಾಮಗಾರಿಯ ಹೊರತಾಗಿ 5ನೇ ವಾರ್ಡಿನ ರಸ್ತೆ ಅಭಿವೃದ್ಧಿಗಾಗಿ 75 ಲಕ್ಷ ರೂ.ಗಳ ಹಣ ಮಂಜೂರು ಮಾಡಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ 5ನೇ ವಾರ್ಡಿನ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಯಿತು.

ಎಪಿಎಂಸಿಯ ಮೂಲಭೂತ ಸೌಕರ್ಯ ಕಾಮಗಾರಿಗೆ ಚಾಲನೆ: 3ನೇ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ)ಯ ಒಳಗೆ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗೆ (4 ಕೋಟಿ 19 ಲಕ್ಷ ರೂ.ಗಳ ವೆಚ್ಚ, ಸಿಸಿ ರಸ್ತೆ) ಚಾಲನೆ ನೀಡಿದ ನಗರ ಶಾಸಕ ನಾರಾ ಭರತ್ ರೆಡ್ದಿ, ಎಪಿಎಂಸಿಯ ಪಕ್ಕದ ಪ್ರದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಹೊರ ಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಜನರಿಂದ ಅಹವಾಲು ಸ್ವೀಕರಿಸಿದರು.

ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಈಗಾಗಲೇ ಓವರ್ ಹೆಡ್ ಟ್ಯಾಂಕ್ ನಿರ್ಮಾಣದ ಕಾಮಗಾರಿ ನಡೆಯುತ್ತಿದೆ. ಹೊರ ಚರಂಡಿ ನಿರ್ಮಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದರು.

ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ: ನಗರದ 8ನೇ ವಾರ್ಡಿನ ಹಂದ್ರಾಳ ಪ್ರದೇಶದಲ್ಲಿ 1 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ನಗರ ಶಾಸಕ ನಾರಾ ಭರತ್ ರೆಡ್ಡಿ ಚಾಲನೆ ನೀಡಿದರು.

ತದ ನಂತರ ನೂತನ ನಿರ್ಮಾಣ ಹಂತದಲ್ಲಿ ಚಾಲ್ತಿಯಲ್ಲಿರುವ ಹಂದ್ರಾಳ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದರು.

ಈ ಸಂದರ್ಭ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಪಾಲಿಕೆಯ ಸದಸ್ಯರಾದ ರಾಜಶೇಖರ ಹಡ್ಲಿಗಿ, ಎಂ.ಪ್ರಭಂಜನಕುಮಾರ್, ರಾಮಾಂಜನೇಯ, ವಿಜಯ್, ಅನೂಪ್ ಸೇರಿದಂತೆ ಹಲವರು ಹಾಜರಿದ್ದರು.

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.