Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಡ ಜನರ ಸೇವೆ ಮಾಡಿದವರಿಗೆ ದೇವರ ಆಶೀರ್ವಾದ ಸಿಗುತ್ತದೆ: ಶಾಸಕ ನಾರಾ ಭರತ್ ರೆಡ್ಡಿ

ಬಡ ಜನರ ಸೇವೆ ಮಾಡಿದವರಿಗೆ ದೇವರ ಆಶೀರ್ವಾದ ಸಿಗುತ್ತದೆ: ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ, ಫೆ.27: ಬಡ ಜನರಿಗೆ ಸೇವೆ ಮಾಡಿದರೆ ಅದೇ ಕ್ಷಣ ನಮಗೆ ದೇವರ ಆಶೀರ್ವಾದ ಸಿಗುತ್ತದೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಅವರು ನಗರದ 2ನೇ ವಾರ್ಡಿನ ಪಾಪಯ್ಯ ಸಭಾಂಗಣ ಬಳಿ ಗುರುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ, ವೈದೇಹಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದಲ್ಲಿ ನಾರಾ ಭರತ್ ರೆಡ್ಡಿ ಅಭಿಮಾನಿ ಬಳಗದ ವತಿಯಿಂದ ಏರ್ಪಡಿಸಿದ್ದ ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದರು.

ವೈದ್ಯಕೀಯ ಚಿಕಿತ್ಸೆ ಬಹಳ ದುಬಾರಿ ಆಗಿರುವ ಈ ದಿನಗಳಲ್ಲಿ ಇಂತಹ ಆರೋಗ್ಯ ಶಿಬಿರ ಏರ್ಪಡಿಸಿರುವುದು ಅಭಿನಂದನಾರ್ಹ ಎಂದರು.

ವೈದೇಹಿ ಆಸ್ಪತ್ರೆಯ ಸಂಸ್ಥಾಪಕರು ನಮ್ಮ ಕುಟುಂಬದ ಸ್ನೇಹಿತರು, ಈ ಆಸ್ಪತ್ರೆಯ ಸೇವೆಯನ್ನು ನಾವು ಶ್ಲಾಘಿಸಲೇಬೇಕು ಎಂದು ಹೇಳಿದ ಅವರು ಪ್ರಾಥಮಿಕ ತನಿಖೆಯಲ್ಲಿ ಎಲ್ಲರೂ ಗುಣಮುಖರು ಎಂಬ ವರದಿ ಬರಲಿ, ಯಾರಿಗೂ ಕೂಡ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವ ಸ್ಥಿತಿ ಬಾರದಿರಲಿ ಎಂದೇ ದೇವರಲ್ಲಿ ನಾನು ಕೋರಿಕೊಳ್ಳುವೆ, ಆದರೆ ವಿಧಿ ಬರಹ ತಪ್ಪಿಸಲಾಗದು ಎಂದರು.

ಈ ಆರೋಗ್ಯ ಶಿಬಿರ ಆಯೋಜಿಸಿದವರ ಕಾಳಜಿಯನ್ನು ನೋಡಿ ನಾನೂ ಕೂಡ ಇಂತಹ ಆರೋಗ್ಯ ಶಿಬಿರಗಳನ್ನು ಬಳ್ಳಾರಿ ನಗರದ ಎಲ್ಲ ವಾರ್ಡ್'ಗಳಲ್ಲಿ ಏರ್ಪಡಿಸುವೆ ಎಂದು ಹೇಳಿದರು.

ಸಂಘಟಕ ಅಬ್ದುಲ್ ರಜಾಕ್ ಮಾತನಾಡಿ; ಬಳ್ಳಾರಿ ನಗರದ ಯಾವುದೇ ವಾರ್ಡಿನಲ್ಲಿ ಅನಾರೋಗ್ಯ ಪೀಡಿತರಾಗಿರುವ ಬಡವರ ನೆರವಿಗೆ ನಿಲ್ಲುವ ಯೋಜನೆ ಇದೆ, ಉಚಿತವಾಗಿ ಚಿಕಿತ್ಸೆ ಕೊಡಿಸಲಾಗುವುದು, ಈ ಶಿಬಿರದಲ್ಲಿ ತಪಾಸಣೆ ಮಾಡಿಸಿಕೊಂಡು ಶಸ್ತ್ರ ಚಿಕಿತ್ಸೆಯ ಅಗತ್ಯ ಕಂಡು ಬಂದಲ್ಲಿ, ಅಂಥವರಿಗೆ ಉಚಿತವಾಗಿ ಶಸ್ತ್ರ ಚಿಕಿತ್ಸೆ ಮಾಡಿಸಲಾಗುವುದು, ಶಾಸಕ ನಾರಾ ಭರತ್ ರೆಡ್ಡಿಯವರ ಬೆಂಬಲದೊಂದಿಗೆ ನಾವು ಈ ಕೆಲಸ ಮಾಡುತ್ತಿದ್ದೇವೆ ಎಂದರು.

ಜಿಲ್ಲಾ ಸರ್ಜನ್ ಡಾ.ಬಸರೆಡ್ಡಿ, ಪಾಪಯ್ಯ, ಶಮೀಮ್ ಜೋಹ್ರಾ, ಲತಾ ಚಾನಾಳ್ ಶೇಖರ್, ವಿಜಯಲಕ್ಷ್ಮೀ, ವೈದೇಹಿ ಆಸ್ಪತ್ರೆಯ ಪ್ರತಿನಿಧಿಗಳು, ಪತ್ರಕರ್ತ ಸಂಘದ ಜಿಲ್ಲಾ ಅಧ್ಯಕ್ಷರು,ಯಾಳ್ಪಿ ವಲಿಬಾಷ, ಯಶೋಧಾ ಮತ್ತಿತರರು ಹಾಜರಿದ್ದರು.

ವೈದೇಹಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಲ್ಲಿಕಾರ್ಜುನ ಅಚ್ಚೊಳ್ಳಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಚಿತ ಶಿಬಿರ ಗಳು ಉಪಯೋಗ ಆಗಬೇಕು, ಯುವ ನಾಯಕ ಶಾಸಕ ಭರತ್ ರೆಡ್ಡಿ ಅವರ ಮೇಲೆ ಜನರು ತುಂಬಾ ಆಶಾಭಾವನೆ ಇಟ್ಟುಕೊಂಡಿದ್ದಾರೆ.

ಚಿಕ್ಕ ವಯಸ್ಸಿನಲ್ಲಿ ಶಾಸಕರಾಗಿದ್ದಾರೆ ಜನರಿಗೆ ನೆರವಾಗುತ್ತದೆ ಎನ್ನುವ ಆಲೋಚನೆಯಲ್ಲಿ ಮತದಾನವನ್ನು ನೀಡಿದ್ದಾರೆ ಹಾಗಾಗಿ ರಾಜಕೀಯವಾಗಿ ಭಾಷಣ ನೆಡದೇ ಜನರಿಗೆ ಉಪಯೋಗವಾಗುವಂತಹ ಕಾರ್ಯಕ್ರಮಗಳನ್ನು ಮಾಡಿ ಅವರಿಗೆ ನೆರವಾಗಬೇಕು ಅನ್ನುವುದು ಜನರ ಮನೋಭಾವವಾಗಿದೆ, ಈಗಾಗಲೇ ಬಳ್ಳಾರಿಯಲ್ಲಿ ಬಹುತೇಕ ರಾಜಕಾರಣಿಗಳು,ಸುಳ್ಳು, ಮೋಸ, ದಬ್ಬಾಳಿಕೆ ವಂಚನೆ, ಮುಂತಾದ ಕೆಲಸಗಳನ್ನು ಮಾಡಿ ಜನರಿಂದ ಚಿಮಾರಿ ಹಾಕಿಸಿಕೊಂಡು ಮೂಲ ಗುಂಪಾಗಿದ್ದಾರೆ ಹಾಗಾಗಿ ಯುವನಾಯರಗೆ ಅವಕಾಶ ನೀಡಿದೆ ಜನರು ಜನನಾಯಕ ಆಗಬೇಕು ಅನ್ನುವುದು ಜನರ ಆಸೆಯಾಗಿದೆ.

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.